ನನ್ನ ಮತ್ತು ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ : ಜನಾರ್ದನ ರೆಡ್ಡಿ – vishwanews24

Featured, ರಾಜ್ಯ ನ್ಯೂಸ್

ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ , ನಲವತ್ತು ವರ್ಷದಿಂದ ಜೊತೆಗಿದ್ದೇವೆ : ಜನಾರ್ದನ ರೆಡ್ಡಿ

ಬಳ್ಳಾರಿ : ನನ್ನ ಮತ್ತು ಬಿ. ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಅವರ ಪುತ್ರ ಕಿರೀಟಿ ಅಭಿನಯದ ಚಲನಚಿತ್ರ ಜೂನಿಯರ್ ಸಿನಿಮಾ ಬಿಡುಗಡೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ವೈಮನಸ್ಸು ಶಮನ ಮಾಡಲು ದೆಹಲಿಗೆ ಕರೆದಿರುವ ಕುರಿತು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮಿಬ್ಬರ ಮಧ್ಯೆ ಯಾರೂ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ತಮ್ಮ ಮತ್ತು ರಾಮುಲು ಸ್ನೇಹದ ಬಗ್ಗೆ ಈಗ ಮಾತನಾಡೋದು ಬೇಡ ಎಂದು ಹೇಳಿದ ಅವರು, ಯಾವುದೇ ವಿಚಾರದಲ್ಲಿ ಪ್ರೀತಿ ಅಭಿಮಾನ ಅನ್ನೋದು ಒಂದು ಘಟನೆಯಿಂದ ಬದಲಾವಣೆ ಆಗಲ್ಲ. ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ, ಹದಿನೈದು ಹದಿನಾರು ವಯಸ್ಸಿನವರಾಗಿದ್ದಾಗಿಂದ ಸ್ನೇಹ ಇದೆ. ನಲವತ್ತು ವರ್ಷದಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ರಾಮುಲು ನಾನು ಇಬ್ಬರು ಒಟ್ಟಿಗೆ ಜೂನಿಯರ್ ಸಿನಿಮಾ ನೋಡ್ತೇವೆ ಎಂದು ಹೇಳಿದರು.

ಮಂಗಳೂರು : ಬಹುಕೋಟಿ ವಂಚನೆ ಪ್ರಕರಣ – ಆರೋಪಿ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ಪ್ರಕರಣ ದಾಖಲು – vishwanews24

ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರಿಟಿ ಜೊತೆಗೆ ಸಿನಿಮಾ ನೋಡಿದ ಜನಾರ್ದನ ರೆಡ್ಡಿ ಸಿನಿಮಾ ಅದ್ಭುತವಾಗಿದೆ ಎಂದಿದ್ದಾರೆ. ಕಿರೀಟಿಗೆ ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ರೂ, ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಕಾನ್ಸಂಟ್ರೇಶನ್ ಮಾಡುತ್ತಿರಲಿಲ್ಲ. ಕಿರೀಟಿ ಪುನೀತ್ ರಾಜ್​​ಕುಮಾರ್​​ ಮತ್ತು ಎನ್‌ಟಿಆರ್ ಅವರನ್ನು ನೋಡಿಕೊಂಡು ಬೆಳೆದಿದ್ದಾನೆ. ಜೂನಿಯರ್ ಸಿನಿಮಾ ಯಶಸ್ವಿಯಾಗಲಿದೆ ಎಂದು ಈ ಸಂದರ್ಭದಲ್ಲಿ ಅವರು ಭರವಸೆ ವ್ಯಕ್ತಪಡಿಸಿದರು.

Leave a Reply