ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ  ಬ್ಯಾಟಿಂಗ್ 

ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ  ಪುತ್ರ ಯತೀಂದ್ರ ಸಿದ್ದರಾಮಯ್ಯ  ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. ಸಚಿವ ಸಂಪುಟ ಪುನಾರಚನೆಗಾಗಿ ಶಾಸಕರು ದೆಹಲಿಗೆ ಹೋಗಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವುದಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವೇ ಇಲ್ಲ. ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ. ಸರ್ಕಾರವೂ ಭದ್ರವಾಗಿದೆ, ಸಿಎಂ ಸ್ಥಾನವೂ ಭದ್ರವಾಗಿದೆ. ನಾನು ಎಷ್ಟು ಭಾರಿ ಅಂತ ಇದನ್ನು ಸ್ಪಷ್ಟಪಡಿಸಲಿ ಹೇಳಿ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಸರ್ಕಾರಕ್ಕೆ ಎರಡೂವರೆ ವರ್ಷ ಆಗಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಕೇಳುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಬೇಕಿದೆ. ಯಾವಾಗ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

Leave a Reply