ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

Featured, ರಾಷ್ಟ್ರ ನ್ಯೂಸ್

ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

ನವದೆಹಲಿ: ನಿನ್ನೆ ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರ0ಜಿತ್ ಸಿಂಗ್ ಚನ್ನಿ  ಅವರು ಸ್ಪರ್ಧಿಸಿದ್ದ ಎರಡೂ ಸ್ಥಾನಗಳಾದ ಚಮ್ಕೌರ್ ಸಾಹಿಬ್ ಮತ್ತು ಭದೌರ್ ನಿಂದ ಚುನಾವಣೆಯಲ್ಲಿ ಸೋತಿದ್ದರು.

ಎಎಪಿ ಅಭೂತಪೂರ್ವ ಗೆಲುವನ್ನು ಸಾಧಿಸಿ, ಅಧಿಕಾರದ ಗದ್ದುಗೆ ಹಂತಕ್ಕೆ ತಲುಪಿತ್ತು. ಈ ಹಿನ್ನಲೆಯಲ್ಲಿ, ಇಂದು ರಾಜ್ಯಪಾಲರನ್ನು ಭೇಟಿಯಾದಂತ ಪಂಜಾಬ್ ಸಿಎಂ ಚರನ್ ಜಿತ್ ಸಿಂಗ್ ಚನ್ನಿಯವರು, ಇದೀಗ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ :

ಮಕ್ಕಳ ಮಾನಸಿಕ ಆರೋಗ್ಯ ನಿರ್ಲಕ್ಷಿಸಬಾರದು – VIshwanews24

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿಯವರು, ನಿನ್ನ ಘೋಷಣೆಯಾದಂತ ವಿಧಾನಸಭಾ ಚುನಾವಣೆಯಲ್ಲಿ ಭದೌರ್ ನಲ್ಲಿ ಆಮ್ ಆದ್ಮೀ ಪಕ್ಷದ ಲಭ್ ಸಿಂಗ್ ಉಗೋಕೆ ಅವರು 57,000 ಕ್ಕೂ ಹೆಚ್ಚು ಮತಗಳನ್ನು ಪಡೆದರೆ, ಚನ್ನಿ ಅವರು 23,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಇನ್ನೊಂದು ಸ್ಥಾನದಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಪಡೆದರೆ, ಆಮ್ ಆದ್ಮೀ ಪಕ್ಷದ ಅವರ ಹತ್ತಿರದ ಪ್ರತಿಸ್ಪರ್ಧಿ ಚರಂಜಿತ್ ಸಿಂಗ್ ಅವರು 54,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಎರಡೂ ಕ್ಷೇತ್ರಗಳಲ್ಲಿ ಚನ್ನಿ ಸೋಲು ಕಂಡಿತ್ತರು.

ಈ ಬಳಿಕ ಟ್ವಿಟ್ ಮಾಡಿದ್ದಂತ ಅವರು, ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಆಮ್ ಆದ್ಮೀ ಪಕ್ಷ ಮತ್ತು ಅವರ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮನ್ ಜೀ ಅವರನ್ನು ವಿಜಯಕ್ಕಾಗಿ ಅಭಿನಂದಿಸುತ್ತೇನೆ. ಅವರು ಜನರ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು. ಇದೀಗ ಅವರು ರಾಜ್ಯಪಾಲರನ್ನು ಭೇಟಿಯಾಗಿ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಎಎಪಿ ಪಂಜಾಬ್ ನಲ್ಲಿ ಅಧಿಕಾರದ ಗದ್ದುಗೆ ಏರಲು ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.

ಇದನ್ನೂ ಓದಿ :

ಆಧುನಿಕ ತಾಯಂದಿರು ತಮ್ಮ ಮಕ್ಕಳಿಗಾಗಿ ಬಟ್ಟೆ ಡೈಪರ್ ಗಳಿಗೆ ಬದಲಾಗುತ್ತಿದ್ದಾರೆ – Vishwanews24

Leave a Reply