ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ : ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ : ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ

ಬೆಂಗಳೂರು : ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದು ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಊಹಾಪೋಹಾಗಳಿಗೆ ಈಗ ತೆರೆ ಬಿದ್ದಿದೆ.

ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, I am wedded to the party and ideology – no compromise ” ಎಂದು ಟ್ವೀಟ್ ಮಾಡುವ ಮೂಲಕ ತಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂಬ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು.

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಲ್ಲಿ ನಕಲಿ ಆಯಪ್‌ ಜಾಗ್ರತೆ ವಹಿಸಲು ಉಡುಪಿ ಎಸ್‌ಪಿ ಸೂಚನೆ – Vishwanews24

Leave a Reply