ನಾಳೆ “ಭಾನುವಾರದ ಲಾಕ್ ಡೌನ್’ ಇರುವುದಿಲ್ಲ”ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆ: vishwanews24

Featured, ಉಡುಪಿ

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.

ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.

ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.