ನಾವು ಬಿಜೆಪಿಯ ಲಸಿಕೆಗೆ ವಿರೋಧ ಮಾಡುತ್ತೇವೆ. ಆದರೆ ಭಾರತ ಸರ್ಕಾರದ ಲಸಿಕೆಗೆ ಸ್ವಾಗತಿಸುತ್ತೇವೆ :ಅಖಿಲೇಶ್ ಯಾದವ್ -Vishwanews24

Featured, ರಾಷ್ಟ್ರ ನ್ಯೂಸ್

ನಾವು ಬಿಜೆಪಿಯ ಲಸಿಕೆಗೆ ವಿರೋಧ ಮಾಡುತ್ತೇವೆ. ಆದರೆ ಭಾರತ ಸರ್ಕಾರದ ಲಸಿಕೆಗೆ ಸ್ವಾಗತಿಸುತ್ತೇವೆ :ಅಖಿಲೇಶ್ ಯಾದವ್ -Vishwanews24

ಹೊಸದಿಲ್ಲಿ: ಕೋವಿಡ್ ಲಸಿಕೆಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರಂಭದಿಂದಲೂ ವಿರೋಧ ಮಾಡುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇನ್ನು ಲಸಿಕಾ ಅಭಿಯಾನಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿ, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೇಂದ್ರದಿಂದಲೇ ಉಚಿತ ಲಸಿಕೆ ನೀಡಲಾಗುತ್ತದೆ ಎಂದಿದ್ದರು.

ಈ ಬೆಳವಣಿಗೆಯ ಬಳಿಕ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, ಜನರ ಆಕ್ರೋಶಕ್ಕೆ ಮಣಿದ ಸರ್ಕಾರ ಜನರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಿದೆ. ಆಕ್ರೋಶದ ಕಾರಣದಿಂದ ರಾಜಕೀಯ ಮಾಡುವುದನ್ನು ಬಿಟ್ಟು ಲಸಿಕಾರಣದ ಮೇಲೆ ನಿಯಂತ್ರಣ ಹೊಂದಲು ನಿರ್ಧರಿಸಿದೆ ಎಂದಿದ್ದಾರೆ.

ನಾವು ಬಿಜೆಪಿಯ ಲಸಿಕೆಗೆ ವಿರೋಧ ಮಾಡುತ್ತೇವೆ. ಆದರೆ ಭಾರತ ಸರ್ಕಾರದ ಲಸಿಕೆಗೆ ಸ್ವಾಗತಿಸುತ್ತೇವೆ. ನಾವು ಲಸಿಕೆ ಪಡೆಯುತ್ತೇವೆ. ಜನರನ್ನೂ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸುತ್ತೇವೆ ಎಂದು ಅಖಿಲೇಶ್ ಹೇಳಿದ್ದಾರೆ.