ನಿರ್ಭಯಾ ಹಂತಕರು ಫೆ.1ರಂದು ಬೆಳಗ್ಗೆ 6ಗಂಟೆಗೆ ನೇಣುಗಂಬಕ್ಕೆ: ದಿಲ್ಲಿ ಕೋರ್ಟ್ -Vishwanews24

Featured, ರಾಷ್ಟ್ರ ನ್ಯೂಸ್

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸಲು ಮತ್ತೊಮ್ಮೆ ಮುಹೂರ್ತ ನಿಗದಿಯಾಗಿದೆ.

ಈ ಮೊದಲು 22ರಂದು ಬೆಳಗ್ಗೆ 7 ಗಂಟೆಗೆ ತಿಹಾರ್‌ ಜೈಲಿನಲ್ಲಿಗಲ್ಲಿಗೇರಿಸುವಂತೆ ದಿಲ್ಲಿ ನ್ಯಾಯಾಲಯ ಆದೇಶಿಸಿತ್ತು.

ಅಪರಾಧಿಗಳಾದ ಮುಖೇಶ್‌ (32), ಪವನ್‌ ಗುಪ್ತಾ (25), ವಿನಯ್‌ ಶರ್ಮಾ (26) ಮತ್ತು ಅಕ್ಷಯ್‌ಕುಮಾರ್‌ ಸಿಂಗ್‌ಗೆ (31) ಹೆಚ್ಚುವರಿ ಸೆಷೆನ್ಸ್‌ ನ್ಯಾಯಾಧೀಶ ಸತೀಶ್‌ಕುಮಾರ್‌ ಅರೋರಾ ಡೆತ್‌ ವಾರಂಟ್‌ ಜಾರಿಗೊಳಿಸಿದರು.

ಅಪರಾಧಿಗಳ ಪೈಕಿ ಮುಖೇಶ್‌ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ಜ.22ರಂದು ಗಲ್ಲಿಗೇರಿಸುವುದನ್ನು ಮುಂದೂಡಲಾಗಿತ್ತು. ಅಲ್ಲದೇ ಮತ್ತೊಮ್ಮೆ ಡೆತ್‌ ವಾರಂಟ್‌ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ದಿಲ್ಲಿ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.

ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಬೇಕೆಂದು ಡೆತ್‌ ವಾರಂಟ್‌ ಜಾರಿ ಮಾಡಿದೆ.

ಉತ್ತರ ಪ್ರದೇಶದ ಮೀರತ್‌ನಿಂದ ಹ್ಯಾಂಗಮನ್‌ ಕಳಸಿಕೊಡುವಂತೆ ತಿಹಾರ ಜೈಲಿನ ಅಧಿಕಾರಿಗಳು ಈಗಾಗಲೇ ಉತ್ತರ ಪ್ರದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ.