ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಆಡಳಿತ ಮಂಡಳಿಯಿಂದ ಸನ್ಮಾನ – vishwanews24
ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ
ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ.
ಘಟನೆ ಕುರಿತು ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್ಮೆಂಟ್ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನವೂ ವ್ಯಕ್ತಿಯೊಬ್ಬರು ಪಂಚೆ ಧರಿಸಿ ಮಾಲ್ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಉಟ್ಕೊಂಡು ನಿಂತಿದ್ರು. ಆಗ ಕೆಳಗಿನ ಫ್ಲೋರ್ನಲ್ಲಿ ಬರ್ತ್ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವಿಚಾರವನ್ನು ಮ್ಯಾನೇಜ್ಮೆಂಟ್ ಗಮನಕ್ಕೆ ತಂದಿದ್ದೆವು ಎಂದಿದ್ದಾರೆ.
ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ಬೇಸತ್ತು ಪತಿ ಆತ್ಮಹತ್ಯೆ – vishwanews24
ಸಂಜೆ ಮತ್ತೆ ರೈತನೊಬ್ಬ ಪಂಚೆ ಉಟ್ಟುಕೊಂಡು ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್ಮೆಂಟ್ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್ಮೆಂಟ್ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೆ ಎಂದು ಹೇಳಿದ್ದಾರೆ.
ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಮಾಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಾಲ್ ಮುಂದೆ ಪ್ರತಿಭಟನೆ ನಡೆಸಿದರು.
ನಿನ್ನೆ ರೈತ ಫಕೀರಪ್ಪಗೆ ಪ್ರವೇಶ ನಿರಾಕರಿಸಿ ಜಿಟಿ ಮಾಲ್ನಲ್ಲಿ ಅವಮಾನಿಸಲಾಗಿತ್ತು. ಇಂದು ಅದೇ ಮಾಲ್ ಆಡಳಿತ ಮಂಡಳಿಯ ಉಸ್ತುವಾರಿ ಸುರೇಶ್ ಅವರಿಂದ ರೈತ ಫಕೀರಪ್ಪರನ್ನು ಸನ್ಮಾನಿಸಲಾಯಿತು. ಶಾಲು, ಹೂವಿನ ಹಾರ ಹಾಕಿ ಸನ್ಮಾನಿಸಿದರು.
