ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ – Vishwanews24

Featured, ರಾಜ್ಯ ನ್ಯೂಸ್

ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್​​ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವೀಟ್​​ನಲ್ಲಿ ಏನಿದೆ?:
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವಿಟ್ಟರ್​​ನಲ್ಲಿ ಬರೆಯುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.

ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ‌್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಟ್ವೀಟ್​​ ಮಾಡಿ ಮನವಿ ಮಾಡಿದ್ದಾರೆ.

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ ಯುವಕ  – Vishwanews24

 

Leave a Reply