ಪಡುಬಿದ್ರಿ:  ಅನುಮತಿ ಇಲ್ಲದೆ ಜಾಥಾ: SDPI ಮುಖಂಡರ ವಿರುದ್ಧ ಪ್ರಕರಣ ದಾಖಲು – vishwanews24

Featured, ಉಡುಪಿ

ಪಡುಬಿದ್ರಿ:  ಅನುಮತಿ ಇಲ್ಲದೆ ಜಾಥಾ: ಎಸ್ಡಿಪಿಐ ಮುಖಂಡರ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ: ಉಡುಪಿ ಯಿಂದ ಹೆಜಮಾಡಿ ಟೋಲ್‌ಗೇಟ್‌ನತ್ತ ಬಂದಿದ್ದ ಎಸ್‌ಡಿಪಿಐ ನಾಯಕ ರಿಯಾಜ್‌ ಕಡುಂಬು ಹಾಗೂ ಮತ್ತಿತರರು ಅನುಮತಿ ಇಲ್ಲದೆ ಜಾಥಾ ನಡೆಸಿರುವ ಕಾರಣಕ್ಕೆ ಅವರ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಜಾಥಾವನ್ನು “ಯೂಟರ್ನ್ ರಾಜ್ಯ ಸರಕಾರದ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್‌ ಜಾಥಾ – 2′ ಎಂಬು ದಾಗಿ ಸಂಘಟಿಸಲಾಗಿತ್ತು.

ಈ ಕುರಿತಾದ ಅನುಮತಿಯನ್ನು ಪಡೆಯಲಾಗಿದೆಯೇ ಎಂದು ಹೆಜಮಾಡಿಗೆ ಆಗಮಿಸಿದ್ದ ಜಾಥಾದ ನಾಯಕ ರಿಯಾಜ್‌ ಕಡುಂಬು ಅವರಲ್ಲಿ ಠಾಣೆಯ ಪಿಎಸ್‌ಐ ಪ್ರಸನ್ನ ಪ್ರಶ್ನಿಸಿದ್ದರು. ಆಗ ಅನುಮತಿ ಪಡೆದಿಲ್ಲ ಎನ್ನುವುದನ್ನು ಎಸ್‌ಡಿಪಿಐ ನಾಯಕರು ಪೊಲೀಸರಿಗೆ ತಿಳಿಸಿದ್ದರು.

ಅನುಮತಿ ಇಲ್ಲದ ಜಾಥಾದಲ್ಲಿ ಕಾರು ಬೈಕ್‌ಗಳಲ್ಲಿನ 75 – 100 ಜನರ ಅಕ್ರಮ ಗುಂಪು ಹೆದ್ದಾರಿ ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಲಿದೆ. ಇದು ಸರಿಯಲ್ಲ ಎಂದು ಪ್ರಸನ್ನ ಅವರು ವಿವರಿಸಿದ್ದರು ಎಂದು ತಿಳಿಸಲಾಗಿದೆ.

ಮುರ್ಡೇಶ್ವರ : ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳಲ್ಲಿ ನಾಲ್ವರು ಸಮುದ್ರ ಪಾಲು – ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ  – vishwanews24

Leave a Reply