ಪಡುಬಿದ್ರಿ : ಕೊರೋನಾ ಭೀತಿ ; ಮಹಾಲಿಂಗೇಶ್ವರ ಮಹಾಗಣಪತಿ ಜಾತ್ರಾ ಮಹೋತ್ಸವ ಸರಳ ಸಾಂಪ್ರದಾಯಿಕ ಆಚರಣೆಗೆ ಆದೇಶ -Vishwanews24

Featured, ಉಡುಪಿ

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾರ್ಚ್ 21 ಮತ್ತು ಮಾರ್ಚ್ ೨೨ ರಂದು ನಡೆಯಲಿದೆ.

ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂದು ನಡೆಯುವ ಎಲ್ಲಾ ಆಚರಣೆಗಳನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಸಲು ಕರ್ನಾಟಕ ಸರಕಾರ ಆದೇಶಿಸಿದೆ.

ಜಾತ್ರೆಯ ಸಂದರ್ಭದಲ್ಲಿ ಅಂಗಡಿಗಳನ್ನು ಹಾಕಬಾರದು ಎಂದು ತಿಳಿಸಲಾಗಿದೆ. ಹಾಗೇಯೇ ಇಲ್ಲಿ ನಡೆಯಬೇಕಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ರದ್ದಾಗಿವೆ.