ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ – Vishwanews24
ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ – Vishwanews24
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.
ಏಕಾಂಗಿಯಾಗಿ 7 ಸುರಂಗಗಳನ್ನು ಕೊರೆದು ಕೃಷಿ ಭೂಮಿಗೆ ನೀರು ಹರಿಸಿದ ಮಹಾಲಿಂಗ ನಾಯ್ಕ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇಧಿಗ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡರು. ಈ ವೇಳೆ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿರುವುದು ಎಲ್ಲರ ಗಮನ ಸೆಳೆದಿದೆ.
President Kovind presents Padma Shri to Shri Amai Mahalinga Naik for Agriculture. An innovative farmer from Dakshina Kannada, he is knownas “Tunnel Man” for digging tunnels to irrigate his barren land and transform it into lush green farm. pic.twitter.com/0hsHFfiCh2
— President of India (@rashtrapatibhvn) March 28, 2022
ಮಹಾಲಿಂಗ ನಾಯ್ಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. 27 ವರ್ಷದ ಮಹಾಲಿಂಗ ನಾಯ್ಕ ಅವರು ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಸುರಂಗ ನೀರಿನ ವ್ಯವಸ್ಥೆಯ ಮೊರೆ ಹೋದರು. ಹೀಗೆ ವಿದ್ಯುತ್ ರಹಿತವಾಗಿ ಗುರುತ್ವದ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಮನೆ ಮಾತಾದರು.
6 ಸುರಂಗ ಕೊರೆದರೂ ಮಹಾಲಿಂಗ ನಾಯ್ಕ ಅವರಿಗೆ ನೀರು ಸಿಕ್ಕಿರಲಿಲ್ಲ. ಆದರೂ ತನ್ನ ಪ್ರಯತ್ನ ಬಿಡದ ಅವರು 7 ಸುರಂಗ ಕೊರೆದೇ ಬಿಟ್ಟರು. ಈ ವೇಳೆ ಅವರ ಪ್ರಯತ್ನ ಯಶಸ್ಸು ದೊರಕಿತ್ತು. ಇದೀಗ ಇವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
