ಪುಂಜಾಲಕಟ್ಟೆ : ಲಾರಿ ಪಲ್ಟಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ – vishwanews24
ಪುಂಜಾಲಕಟ್ಟೆ : ಮಗುಚಿ ಬಿದ್ದ ಲಾರಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ
ಪುಂಜಾಲಕಟ್ಟೆ,: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಅನಾಹುತ ಸಂಭವಿಸುತ್ತಿದೆ. ಹಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿವೆ. ಇನ್ನೊಂದೆಡೆ ಪುಂಜಾಲಕಟ್ಟೆ ಬಳಿ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜು.19ರ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ – vishwanews24
ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.
ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಲಾರಿ ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.
ಕಾರ್ಕಳ: ರುದ್ರಭೂಮಿಯಲ್ಲಿ ಶವ ಸಂಸ್ಕಾರದ ವೇಳೆ ಉರುಳಿ ಬಿದ್ದ ಮರ , ತಪ್ಪಿದ ಅನಾಹುತ – vishwanews24
