ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು

ಪುತ್ತೂರು: ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಅವರು ಅನಾರೋಗ್ಯದಿಂದ ಮಂಗಳವಾರ ಜು.9ರಂದು ನಿಧನರಾಗಿದ್ದಾರೆ.

ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳವಾರ ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮನೆಗೆ ಹಿಂದಿರುಗುವ ಮಾರ್ಗಮಧ್ಯೆ ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಮತ್ತೆ ಆಸ್ಪತ್ರೆಗೆ ತಲುಪಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಸುಪ್ರೀತಾ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

ಕಾಪು : ಎಲ್ಲೂರಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ಕಾಮಗಾರಿ ಶೀಘ್ರದಲ್ಲಿ ಆರಂಭ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ  – vishwanews24

Leave a Reply