ಪುತ್ತೂರು : ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ: ಕಲ್ಲಡ್ಕ ಪ್ರಭಾಕರ್ ಭಟ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ.

ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.

ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ.

ಕಾಪು : ಕಾರ್ಯಕರ್ತರ ಪರಿಶ್ರಮದಿಂದಾಗಿ ಈ ಬಾರಿಯೂ ಕಾಪು ಕ್ಷೇತ್ರದಲ್ಲಿ ಮತ್ತೆ ಬಿಜೆಪಿಗೆ ವಿಜಯ ಮಾಲೆ : ಗುರ್ಮೆ – Vishwanews24

ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆ. ಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.

Leave a Reply