ಪುತ್ತೂರು : ಕರಾವಳಿಯ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಶೆಣೈ ನಿಧನ – Vshwanews24

Featured, ದಕ್ಷಿಣ ಕನ್ನಡ

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಶೆಣೈ ನಿಧನ – Vshwanews24

ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಮುಂಗಾರು, ಉದಯವಾಣಿ, ಹೊಸದಿಗಂತ ಸೇರಿದಂತೆ ಪತ್ರಿಕಾ ರಂಗದಲ್ಲಿ ಮೂರು ದಶಕಕ್ಕೂ ಅಧಿಕ ಕಾಲ ಕರ್ತವ್ಯ ನಿರ್ವಹಿಸುತಿದ್ದ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.

ಸರ್ವಧರ್ಮ ಸಮನ್ವಯ ಪ್ರವಚನಕಾರ, ಕನ್ನಡ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಮ್ ಸುತಾರ ನಿಧನ – Vishwanews24

Leave a Reply