ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ 

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ.

ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ.

ಉಡುಪಿಯಲ್ಲಿ “ಕೃಷ್ಣ” ಕೊಟ್ರೆ “ಪ್ರಸಾದ” ಇಲ್ಲಾಂದ್ರೆ “ಗೋವಿಂದ”..!!

ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾವು ಹೇಮನಾಥ ಶೆಟ್ಟಿ ಕೂಡಾ ಆಕಾಂಕ್ಷಿಗಳಾಗಿದ್ದರು.

ಅಶೋಕ್ ಕುಮಾರ್ ರೈ ಅವರು ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಟಿಕೆಟ್ ಗೆ ಪ್ರಯತ್ನಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ತೊರೆದು ಕೈ ಪಾಳಯ ಸೇರಿದ್ದರು.

ಕಾಪು: ಸೊರಕೆಯವರು ತನ್ನ ಆಡಳಿತ ಅವಧಿಯಲ್ಲಿ ಕಾಪು ಕ್ಷೇತ್ರವನ್ನು ಅಭಿವೃದ್ಧಿಯ ತುತ್ತತುದಿಗೆ ತಂದು ನಿಲ್ಲಿಸಿದ್ದರು : ಡಾ.ದೇವಿ ಪ್ರಸಾದ್ ಶೆಟ್ಟಿ – Vishwanews24

ಬಿಜೆಪಿ ಇದುವರೆಗೆ ಟಿಕೆಟ್ ಅಂತಿಮಗೊಳಿಸಿಲ್ಲ. ಎಸ್ ಡಿಪಿಐಯಿಂದ ಶಾಫಿ ಬೆಳ್ಳಾರೆ ಮತ್ತು ಆಮ್ ಆದ್ಮಿಯಿಂದ ಡಾ ವಿಶುಕುಮಾರ್ ಸ್ಪರ್ಧೆ ಮಾಡುತ್ತಿದ್ದಾರೆ.

Leave a Reply