ಪುತ್ತೂರು : ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ: ರಾಜ್ಯ ಸರಕಾರದ ವಿರುದ್ದ ಆಕ್ರೋಶ…Vishwanews24

Featured, ದಕ್ಷಿಣ ಕನ್ನಡ

ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ: ರಾಜ್ಯ ಸರಕಾರದ ವಿರುದ್ದ ಆಕ್ರೋಶ…

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ : ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಮೆರವಣಿಗೆ ಮೂಲಕ ಹುಟ್ಟೂರಿಗೆ – Vishwanews24 

ಈ ನಡುವೆ ಕರಾವಳಿಯ ಬಿಜೆಪಿ ಮುಖಂಡರ ವಿರುದ್ಧ ಪ್ರವೀಣ್ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಿಜೆಪಿ ನಾಯಕರಾದ ಅಂಗಾರ, ಸುನಿಲ್ ಕುಮಾರ್, ನಳಿನ್ ಕುಮಾರ್ ಕಟೀಲ್ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಪ್ರವೀಣ್ ನೆಟ್ಟಾರ್ ಹತ್ಯೆ- ಬಿಲ್ಲವ ಸಮುದಾಯದ ವಿಧಿಯ ಪ್ರಕಾರ ಅಂತ್ಯಸಂಸ್ಕಾರ:vishwanews24

 

Leave a Reply