ಪುತ್ತೂರು : ಪ್ರವೀಣ್ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಎನ್‌ಐಎ ಅಧಿಕಾರಿಗಳಿಂದ ತೀವ್ರ ಶೋಧ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಎನ್‌ಐಎ ಅಧಿಕಾರಿಗಳಿಂದ ತೀವ್ರ ಶೋಧ 

ಪುತ್ತೂರು: ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು, ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ ಐ ಸಂಘಟನೆಯ ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಲುಕ್ ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ ಪುತ್ತೂರು , ಸುಳ್ಯ , ಬೆಳ್ಳಾರೆ ಸಹಿತ ಬಸ್ ನಿಲ್ದಾಣ , ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ. ಅಲ್ಲದೆ ನಾಲ್ವರ ಪತ್ತೆಗೆ ಎನ್ಐಎ ಶೋಧ ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರಿನ ಹಲವೆಡೆ ಕಾರ್ಯಾಚರಣೆ ನಡೆಸಿದ್ದಾರೆ

ಪಂಜುರ್ಲಿ ದೈವದ ರೀಲ್ಸ್.. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ ಯುವತಿ – Vishwanews24

ಸುಳ್ಯ ತಾಲೂಕು ಬೆಳ್ಳಾರೆಯ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ. ಎಚ್., ಸುಳ್ಯ ತಾಲೂಕು ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್‌ರವರ ಪತ್ತೆಗೆ ನೊಟೀಸ್ ಜಾರಿ‌ ಮಾಡಲಾಗಿದೆ. ಮಹಮ್ಮದ್ ಮುಸ್ತಫಾ ಹಾಗೂ ತುಫೈಲ್ ಎಂ.ಎಚ್. ಪತ್ತೆಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದು ಉಳಿದಿಬ್ಬರ ಪತ್ತೆಗೆ ತಲಾ 2 ಲಕ್ಷ ರೂ. ಬಹುಮಾನ ಪ್ರಕಟಿಸಲಾಗಿದೆ. ಎನ್‌ಐಎ ಕಚೇರಿಯ ಬೆಂಗಳೂರು ಘಟಕದ ಪೊಲೀಸ್ ಅಧೀಕ್ಷಕರ ಕಚೇರಿಗೆ 080-29510900 ಮಾಹಿತಿ ನೀಡಬಹುದು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಶಕ್ಕೆ ಪಡೆದಿದ್ದ ಶಂಕಿತ ಉಗ್ರರನ್ನು ಬಿಡುಗಡೆ ಮಾಡಿದ ಎನ್‌ಐಎ ಅಧಿಕಾರಿಗಳು - The NIA officers released arrested suspected terrorists today| TV9 Kannada

Leave a Reply