ಪುತ್ತೂರು: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರು: ಪುತ್ತೂರಿನ ತಿಂಗಳಾಡಿಯಲ್ಲಿ ಹಿಂದೂ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬದ್ರುದ್ದೀನ್ ನ್ಯಾಯಾಂಗ ಬಂಧಿತ ಆರೋಪಿಯಾಗಿದ್ದಾನೆ.

ಬುಧವಾರ ಸಂಜೆ ಇಲ್ಲಿನ ಕುಂಬ್ರದ ತಿಂಗಳಾಡಿಯ ಸೂಪರ್ ಬಜಾರ್‌ವೊಂದಕ್ಕೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಲೆಂದು ಯುವತಿಯೊಬ್ಬಳು ಬಂದಿದ್ದಳು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ವೇಳೆ ಆರೋಪಿ ಬದ್ರುದ್ದೀನ್ ಆಕೆಯ ದೇಹವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಳಿಕ ಯುವತಿ ಜೋರಾಗಿ ಬೊಬ್ಬೆ ಹೊಡೆಯುತ್ತಿದ್ದಂತೆ ಬದ್ರುದ್ದೀನ್ ಸ್ಥಳದಿಂದ ಪರಾರಿಯಾಗಿದ್ದ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಘಟನೆಗಳ ಒತ್ತಾಯ ಹಾಗು ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು ಅವರ ಸೂಚನೆಯಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಢಿಕ್ಕಿಯಾಗಿ ತಂದೆ, ಮಗನ ಸಾವಿಗೆ ಕಾರಣವಾದ ಲಾರಿಯನ್ನು ಚಲಾಯಿಸುತ್ತಿದ್ದದ್ದು 16 ವರ್ಷದ ಬಾಲಕ – Vishwanews24

Leave a Reply