ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ – ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ : ಹರೀಶ್ ಪೂಂಜಾ – Vishwanews24 https://wp.me/p9KQap-kOq

Featured, ದಕ್ಷಿಣ ಕನ್ನಡ

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ – ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ : ಹರೀಶ್ ಪೂಂಜಾ

 ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಿಸಿ ಬಳಿಕ ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ ಎಂದಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಅಂತ ಎಂಬುದನ್ನ ಸ್ಯಾಂಪಲ್ ರೀತಿಯಲ್ಲಿ ತೋರಿಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ.

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್  ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ರವರಿಗೆ ಸನ್ಮಾನ – Vishwanews24

ಈ ಬಗ್ಗೆ ಈಗಾಗ್ಲೇ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ. ಯಾವ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ, ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ಮಾಡ್ತಿವಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್ – VIshwanews24

Leave a Reply