ಪುತ್ತೂರು:ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು :  ಗ್ರಾ.ಪಂ ಸದಸ್ಯ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು:ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು :  ಗ್ರಾ.ಪಂ ಸದಸ್ಯ ಮೃತ್ಯು

ಪುತ್ತೂರು: ಕಾರೊಂದು ಎರಡು ವಿದ್ಯುತ್‌ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14 ರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಎಂದು ಗುರುತಿಸಲಾಗಿದೆ.

ಫಾರ್ಡ್‌ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಅವರು ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.

ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ : ಸಿದ್ದರಾಮಯ್ಯ ಆಕ್ರೋಶ – Vishwanews24

Leave a Reply