ಪುಷ್ಪ-2 ಕಾಲ್ತುಳಿತ ಪ್ರಕರಣ : FIR ರದ್ದತಿಗೆ ಹೈಕೋರ್ಟ್ ಮೆಟ್ಟಿಲೇರಿದ ಅಲ್ಲು ಅರ್ಜುನ್ – vishwanews24
ಪುಷ್ಪ-2 ಕಾಲ್ತುಳಿತ ಪ್ರಕರಣ : FIR ರದ್ದತಿಗೆ ಹೈಕೋರ್ಟ್ ಮೆಟ್ಟಿಲೇರಿದ ಅಲ್ಲು ಅರ್ಜುನ್
ಹೈದರಬಾದ್: ‘ಪುಷ್ಪ-2ʼ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದತಿಗೆ ನಟ ಅಲ್ಲು ಅರ್ಜುನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲು ಅರ್ಜುನ್ ಅವರ ʼಪುಷ್ಪ-2 ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ರಿಲೀಸ್ ಆದ ವಾರದೊಳಗೆಯೇ ಸಿನಿಮಾ 1000 ಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. ಪ್ಯಾನ್ ಇಂಡಿಯಾದಲ್ಲಿ ಹೊಸ ದಾಖಲೆಗೆ ಮುಂದಾಗುತ್ತಿರುವಾಗಲೇ ʼಪುಷ್ಪ-2ʼ ಚಿತ್ರ ತಂಡದ ಮೇಲಾಗಿರುವ ಎಫ್ಐಆರ್ ಅಲ್ಲು ಅರ್ಜುನ್ ಅವರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.
ಡಿ.24ರಂದು ನಟ ಶಿವರಾಜ್ಕುಮಾರ್ಗೆ ಅಮೆರಿಕಾದಲ್ಲಿ ಸರ್ಜರಿ – vishwanews24
ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಸೇರಿ, ಚಿತ್ರತಂಡ ಹಾಗೂ ಥಿಯೇಟರ್ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.
ಅಲ್ಲು ಅರ್ಜುನ್ ಅವೆ ಮೇಲೂ ಕೇಸ್ ದಾಖಲಾಗಿದ್ದು, ಇದೀಗ ಅಲ್ಲು ಅರ್ಜುನ್ ಈ ಸಂಬಂಧ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತನ್ನ ಮೇಲೆ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ನಟ ತೆಲಂಗಾಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನ್ಯಾಯಾಲಯ ಶೀಘ್ರದಲ್ಲೇ ಅರ್ಜಿಯನ್ನು ವಿಚಾರಿಸಲಿದೆ ಎಂದು ವರದಿಯಾಗಿದೆ.
ಉಡುಪಿ: ಕಾಮಗಾರಿ ಹಿನ್ನೆಲೆ – ಡಿ. 14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ – vishwanews24
ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು.
