ಪೋಲಿಸರಿಗೆ ಶರಣಾದ ಮಂಗಳೂರಿನ ಬಾಂಬರ್.
ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ
ಈ ಹಿಂದೆ ನಡೆದ ಪ್ರಕರಣಗಳಿಂದಾಗಿ ಈಗ ಮತ್ತೆ ಈ ಪ್ರಶ್ನೆ ಎದ್ದಿದ್ದು, 2018ರಲ್ಲಿ ಆದಿತ್ಯ ರಾವ್ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಪ್ರಕರಣದಲ್ಲಿ 9 ತಿಂಗಳು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.
ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಆದಿತ್ಯ ರಾವ್, 2018 ರಲ್ಲಿ ನಾನು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೆ. ಆದರೆ ನನಗೆ ಉದ್ಯೋಗ ಸಿಕ್ಕಿರಲಿಲ್ಲ. ಇದಕ್ಕೆ ಸಿಟ್ಟಾಗಿ ನಾನು ಆಗಸ್ಟ್ ತಿಂಗಳಿನಲ್ಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೆ ಎಂದು ಹೇಳಿ ತಪ್ಪೊಪ್ಪಿಕೊಂಡಿದ್ದ.
ಆದಿತ್ಯ ರಾವ್ ಇಂದು ಮುಂಜಾನೆ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿ ಶರಣಾಗಿದ್ದು, ಈ ಪ್ರಕರಣದ ಸಂಬಂಧ ಎದ್ದಿದ್ದ ಎಲ್ಲ ಅನುಮಾನಗಳಿಗೆ ವಿಚಾರಣೆಯ ನಂತರ ಉತ್ತರ ಸಿಗಲಿದೆ.
