ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24

Featured, ರಾಷ್ಟ್ರ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದಲ್ಲಿ ಕ್ಯಾಪಿಟಲ್ ಹಿಲ್ ಹಿಂಸಾಚಾರ ಮತ್ತು ರೈತರ ಪ್ರತಿಭಟನೆಯ ಬಗ್ಗೆ ಮೌನವಾಗಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಇಸ್​ ಬಾರ್​ ಟ್ರಂಪ್​ ಸರ್ಕಾರ್​​’ ಎಂದು ಪ್ರಧಾನಿ ಅಂದು ಹೇಳಿದ್ದನ್ನು ನೆನಪಿಸಿಕೊಳ್ಳಲು ಇಚ್ಛಿಸುತ್ತೇನೆ. ದೇಶದ ಪ್ರಧಾನಿಯಾಗಿದ್ದುಕೊಂಡು ನೀವು ಆ ಹೇಳಿಕೆ ಕೊಡಬಾರದಿತ್ತು. ಆ ಹೇಳಿಕೆ ಅಮೆರಿಕನ್ನರ ಗೌರವಕ್ಕೆ ಚ್ಯುತಿ ತಂದತ್ತಾಗುತ್ತದೆ ಎಂದು ಹೇಳಿದ್ದಾರೆ.

ತಮ್ಮ ದೇಶದ ಅಧ್ಯಕ್ಷನ ಆಯ್ಕೆಯು ಅಮೆರಿಕನ್ನರಿಗೆ ಬಿಟ್ಟ ವಿಚಾರ. ಅದು ಅವರ ಆಯ್ಕೆ, ನಿಮ್ಮದಲ್ಲ. ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ನಿಮಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎನ್ನುವುದು ಅರ್ಥವಾಗುತ್ತದೆ. ಅಷ್ಟೇ ಅಲ್ಲದೆ ದೇಶದ ಅನ್ನದಾತರ ಪ್ರತಿಭಟನೆ ಕುರಿತು ಮೌನವಾಗಿ ಇರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಪುನರುಚ್ಚರಿಸಿದ್ದು, ಕೃಷಿಯನ್ನು ಅವಲಂಬಿಸಿರುವ ಶೇಕಡಾ 60ರಷ್ಟು ಪಂಜಾಬ್, ಹರಿಯಾಣದ ರೈತರು ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ನೂತನ ಕೃಷಿ ಕಾಯ್ದೆಯು ರೈತರ ಮೇಲೆ ಮಾತ್ರವಲ್ಲದೆ ಮಧ್ಯಮ ವರ್ಗದ ಮೇಲಿನ ಆಕ್ರಮಣವೂ ಆಗಿದೆ” ಎಂದು ಹೇಳಿದ್ದಾರೆ.

http://ಉಳ್ಳಾಲ: ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಕಾಂಡಮ್‌ ಹಾಗೂ ಅವಹೇಳನಕಾರಿ ಬರಹ ಪತ್ತೆ -Vishwanews24