ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24
ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24
ಹರಿದ್ವಾರ: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಅಹಮದಾಬಾದ್ ನ ನವೀಕೃತ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟಿಸಿದ್ದರು. ಕ್ರೀಡಾಂಗಣಕ್ಕೆ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿರುವುದಕ್ಕೆ ಟೀಕೆಗಳು ಕೇಳಿಬಂದಿದ್ದವು.
ಇದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್ ಪ್ರಧಾನಿ ನರೇಂದ್ರ ಮೋದಿ ಒಬ್ಬ ಯುಗಪುರುಷ. ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
‘ಹಿಂದಿನ ಕಟ್ಟಡಗಳು ಮತ್ತು ಸ್ಮಾರಕಗಳಿಗೆ ಆ ಕಾಲದ ಪ್ರಮುಖ ವ್ಯಕ್ತಿಗಳ ಹೆಸರಿಡಬಹುದಾಗಿದ್ದರೆ, ವರ್ತಮಾನ ಕಾಲದ ಖ್ಯಾತ ವ್ಯಕ್ತಿ ಹಾಗೂ ಯುಗಪುರುಷರಾಗಿರುವ ಮೋದಿ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇಡಬಾರದೇಕೆ’ ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಸಿಎ ಇನ್ಸ್ಟಿಟ್ಯೂಟ್ಗೆ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ -Vishwanews24
ಕ್ರಿಕೆಟ್ ಕ್ರೀಡಾಂಗಣಕ್ಕೆ ಮೋದಿ ಹೆಸರಿಡುತ್ತಿದ್ದಂತೆ ಇದಕ್ಕೆ ರಾಜಕೀಯ ವಲಯದಲ್ಲಿ ಟೀಕೆಗಳು ಕೇಳಿಬಂದಿದ್ದವು. ದೇಶಕ್ಕೇ ಮೋದಿ ಹೆಸರಿಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮ್ ದೇವ್, ಇದು ಕೇವಲ ರಾಜಕೀಯ ಪ್ರೇರಿತ ಹೇಳಿಕೆಯಷ್ಟೆ, ಅದಕ್ಕಿಂತ ಹೆಚ್ಚಿನದ್ದೇನಿಲ್ಲ ಎಂದು ಹೇಳಿದ್ದಾರೆ.
ಉಡುಪಿ : ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
