ಇಂದು ಪ್ರಧಾನಿ ಮೋದಿ ಸಮ್ಮುಖದಲ್ಲಿ ಉಮೇಶ್‌ ಜಾಧವ್‌ ಬಿಜೆಪಿಗೆ ಸೇರ್ಪಡೆ – Vishwanews24

Featured, ರಾಜ್ಯ ನ್ಯೂಸ್
ಖಾಜಾ ಬಂದೇನವಾಜ್ ದರ್ಗಾ, ಶರಣಬಸವೇಶ್ವರ ದೇವಸ್ಥಾನ, ಕೋರಂಟಿ ಹನುಮಾನ ಮಂದಿರ, ರಾಮ ಮಂದಿರ, ರಾಣೇಸ್ಪಿರ್ ದರ್ಗಾ, ಚರ್ಚ್​ಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಾಧವ್, ಕಡೆಗೂ ತಮ್ಮ ಮುಂದಿನ ನಡೆ ಬಗ್ಗೆ ಘೋಷಣೆ ಮಾಡಿದರು. ಕಾರ್ಯಕರ್ತರೊಂದಿಗೆ ಸಮಗ್ರವಾಗಿ ಚರ್ಚಿಸಿದ್ದು, ಇಂದು ಕಲಬುರಗಿ ನಗರಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ತಿಳಿಸಿದರು.

ಯಾವುದಾದರೂ ದಿಟ್ಟ ನಡೆ ಇಡಬೇಕಾದರೆ ದೇವರ ದರ್ಶನ ಮಾಡುವುದು ನನ್ನ ರೂಢಿ. ಬರುವ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಯಶಸ್ಸು ಸಿಗಲಿ ಹಾಗೂ ಲೋಕ ಕಲ್ಯಾಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದಾಗಿ ಹೇಳಿದರು.

ಭದ್ರತೆಗೆ 1700 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.