ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು : ಎಚ್.ಡಿ.ರೇವಣ್ಣ ಮನವಿ – Vishwanews24
ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು : ಎಚ್.ಡಿ.ರೇವಣ್ಣ ಮನವಿ
ಮೈಸೂರು : ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾನುವಾರ ಆಯೋಜಿಸಿದ್ದ 4 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು. ಹಾಸನ ಜಿಲ್ಲೆಯೊಂದಕ್ಕೆ 10500 ಕೋಟಿ ರೂ. ಅನುದಾನವನ್ನು ರಸ್ತೆ ಅಭಿವೃದ್ಧಿಗೆ ನೀಡಿದ್ದಾರೆ. ಹತ್ತು ವರ್ಷಗಳಲ್ಲಿ ಹಾಸನ ಜಿಲ್ಲೆಗೆ 35 ಸಾವಿರ ಕೋಟಿ ನೀಡಿದ್ದಾರೆ ಎಂದರು.
ಎಚ್.ಡಿ. ದೇವೇಗೌಡರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುವುದಕ್ಕೆ ಹೋದರೆ ಯಾವುದೇ ಯೋಜನೆಗಳನ್ನು ಕೊಟ್ಟರೂ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ. ದೇಶದಲ್ಲಿ ವಿರೋಧಿಗಳು ಇದ್ದರೂ ನಿತಿನ್ ಗಡ್ಕರಿ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ, ಮುಂದೆಯೂ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪರವಾಗಿ ರಾಜ್ಯದ ಜನ ನಿಲ್ಲಬೇಕು ಎಂದು ಅವರು ಕೋರಿದರು.
ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ನಿರ್ಬಂಧ – Vishwanews24
