ಪ್ರಧಾನಿ ಮೋದಿ ಹತ್ಯೆ ಸಂಚುಕೋರರ ನಾಶಕ್ಕಾಗಿ ಕಾಲಭೈರವೇಶ್ವರನಿಗೆ ಪೂಜೆ
ಮೈಸೂರು: ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆಸಿದವರು ಸರ್ವನಾಶವಾಗಲಿ ಎಂದು ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಪೂಜೆ ನಡೆಯುತ್ತಿದೆ.
ಕೆ.ಟಿ.ಸ್ಟ್ರೀಟ್ನಲ್ಲಿರುವ ಕಾಲ ಭೈರವೇಶ್ವರ ದೇವಾಲಯದಲ್ಲಿ ಬಿಜೆಪಿ ಹಲವು ಮುಖಂಡರು ಸೇರಿ, ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸುಧಾರಣೆಯಾಗಲಿ ಹಾಗೂ ಪ್ರಧಾನಿ ಮೋದಿ ಹತ್ಯೆಗೆ ಸಂಚುನಡೆಸಿದವರು ಸರ್ವನಾಶವಾಗಲಿ ಎಂದು ಪೂಜೆ ನಡೆಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ ಮತ್ತಿತರ ಮುಖಂಡರು ನೇತೃತ್ವ ವಹಿಸಿದ್ದಾರೆ.
