ಪ್ರಧಾನಿಯವರಿಗೆ ಗಟ್ಸ್ ಇರುವುದಕ್ಕೆ ರಿಸ್ಕ್ ತೆಗೆದುಕೊಂಡು ದೇಶದ ಜನರನ್ನು ಉಕ್ರೇನ್ನಿಂದ ರಕ್ಷಿಸುತ್ತಿದ್ದಾರೆ : ಪ್ರತಾಪ್ ಸಿಂಹ – Vishwanews24
ಪ್ರಧಾನಿಯವರಿಗೆ ಗಟ್ಸ್ ಇರುವುದಕ್ಕೆ ರಿಸ್ಕ್ ತೆಗೆದುಕೊಂಡು ದೇಶದ ಜನರನ್ನು ಉಕ್ರೇನ್ನಿಂದ ರಕ್ಷಿಸುತ್ತಿದ್ದಾರೆ : ಪ್ರತಾಪ್ ಸಿಂಹ – Vishwanews24
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಗಟ್ಸ್ ಇರುವುದಕ್ಕೆ ರಿಸ್ಕ್ ತೆಗೆದುಕೊಂಡು ದೇಶದ ಜನರನ್ನು ಉಕ್ರೇನ್ನಿಂದ ರಕ್ಷಿಸುತ್ತಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿ ರಕ್ಷಣಾ ಕಾರ್ಯ ಬಹಳ ಚುರುಕಾಗಿ ನಡೆಯುತ್ತಿದೆ. ಉಕ್ರೇನ್ ಗಡಿ ದಾಟಿದ ಕೂಡಲೇ ಅಲ್ಲಿಂದ ಸುರಕ್ಷಿತವಾಗಿ ಕರೆದುಕೊಂಡು ಬರುತ್ತಿದ್ದೇವೆ. ಮೂರು ಬಾರಿ ಸಲಹೆ ಕೊಟ್ಟಿದ್ದೆವು. ಉಕ್ರೇನ್ನಿಂದ ಹೊರಡಿ ಅಂತಾ. ಯಾರು ಕೇಳಲಿಲ್ಲ. ತೆರಿಗೆ ಹಣದಿಂದ ಅವರನ್ನು ವಿಮಾನದಲ್ಲಿ ಕರೆದುಕೊಂಡು ಬರಲಾಗಿದೆ. ಕೆಲವರು ಕೃತಜ್ಞತೆ ಇಲ್ಲದೆ ಮಾತಾಡಿದ್ದಾರೆ. ಅವರ ಮಟ್ಟಕ್ಕೆ ಇಳಿದು ನಾನು ಅವರನ್ನು ಟೀಕೆ ಮಾಡಲ್ಲ ಅಂತ ಪ್ರತಾಪ್ ಸಿಂಹ ಹೇಳಿದರು.
