ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ : ಸಚಿವ ಸುಧಾಕರ್ – Vishwanews24
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ : ಸಚಿವ ಸುಧಾಕರ್
ಬೆಂಗಳೂರು ; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಳಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ಬಂಧನಕ್ಕೆ ಐದು ತಂಡ ರಚನೆ ಮಾಡಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಸುಮ್ನೆ ಇಲ್ಲ. ಕೊಲೆಗಡುಕರನ್ನು ಬಂಧಿಸಲಾಗುತ್ತದೆ. ಇವೆಲ್ಲದರ ಹಿಂದೆ ಕೆಲ ಪಕ್ಷಗಳು ಬೆನ್ನಲುಬಾಗಿ ನಿಂತಿವೆ. ಎನ್ ಐಎ ಯಿಂದ ಕೊಲೆ ಪ್ರಕರಣದ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಜರಂಗದಳದ ಮುಖಂಡ, ಅಕ್ಷಯ ಕೋಳಿ ಅಂಗಡಿ ಮಾಲೀಕ ಪ್ರವೀಣ್ ನೆಟ್ಟಾರು (32) ಎಂಬುವರನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ.
