ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು – vishwanews24
ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು
ಬೆಂಗಳೂರು: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ನಾಲ್ಕು ಆನೆಗಳನ್ನು ವಿಮಾನದ ಮೂಲಕ ಜಪಾನ್ಗೆ ಕಳುಹಿಸಿಕೊಡಲಾಯಿತು.
ಬನ್ನೇರುಘಟ್ಟ ಉದ್ಯಾನವನವು ಜಪಾನ್ನ ಹಿಮೇಜಿ ಸೆಂಟ್ರಲ್ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್ನ ಹಿಮೇಜಿ ಸೆಂಟ್ರಲ್ ಪಾರ್ಕ್ ಗೆ ಕೊಡಲಾಗುತ್ತಿದೆ.
ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತಲಾ ನಾಲ್ಕು ಚಿರತೆಗಳು, ಜಾಗ್ವಾರ್ಗಳು, ಪೂಮಾಗಳು, ಮೂರು ಚಿಂಪಾಂಜಿಗಳು ಮತ್ತು ಎಂಟು ಕ್ಯಾಪುಚಿನ್ ಕೋತಿಗಳನ್ನು ಹಸ್ತಾಂತರಿಸಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ವಿಶಾಲ್ ಸೂರ್ಯ ಸೇನ್ ತಿಳಿಸಿದ್ದಾರೆ.
ಆನೆಗಳನ್ನು ಕ್ರಾಲ್ನಲ್ಲಿ ಇರಿಸಿ ಲಾರಿಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿಸಲಾಯಿತು. ರಾತ್ರಿ 8 ಗಂಟೆ ಸುಮಾರಿಗೆ ಕತಾರ್ ಏರ್ವೇಸ್ನ ಸರಕು ಸಾಗಣೆ ವಿಮಾನದಲ್ಲಿ ಆನೆಗಳನ್ನು ಕೊಂಡೊಯ್ಯಲಾಯಿತು.
ಸುಬ್ರಮಣ್ಯ : ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ – vishwanews24
ವಿಮಾನದಲ್ಲಿ 8 ಗಂಟೆ ಪ್ರಯಾಣ ಬೆಳೆಸಿ ಆನೆಗಳು ಜಪಾನ್ನ ಒಸಾಕಾದ ಕನ್ಸಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿವ ಅಲ್ಲಿಂದ ಹಿಮೇಜಿ ಸೆಂಟ್ರಲ್ ಪಾರ್ಕ್ ರಸ್ತೆ ಮಾರ್ಗದಲ್ಲಿ ತಲುಪಲಿವೆ. ಒಟ್ಟಾರೆ 20 ಗಂಟೆಗಳ ಕಾಲ ಪ್ರಯಾಣದ ಮೂಲಕ ಆನೆಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ.
