ಪ್ಲಾಸ್ಟಿಕ್ ನಿಷೇಧ : ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ನಿಂದ ಮಹತ್ವದ ನಿರ್ಧಾರ -Vishwanews24

Featured, ರಾಜ್ಯ ನ್ಯೂಸ್

ತಿರುಮಲ : ಪ್ಲಾಸ್ಟಿಕ್ ನಿಷೇಧದ ಕುರಿತಂತೆ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೊಂದು ವಾರದಲ್ಲಿ ದೇವಸ್ಥಾನದ ಎಲ್ಲಾ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲು ಮುಂದಾಗಿದೆ.

ಹೌದು, ದೇಶದ ಅತಿ ದೊಡ್ಡ ಶ್ರೀಮಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿ ತಿರುಮಲ ದೇವಸ್ಥಾನದ ಪರಿಸರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ ದೇವಸ್ಥಾನದ ಎಲ್ಲ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲು ಮುಂದಾಗಿದೆ.

ಇನ್ನು ಎರಡನೇ ಹಂತದಲ್ಲಿ ತಿರುಮಲ ವಸತಿ ಗೃಹಗಳಲ್ಲಿ ತಂಗುವ ಭಕ್ತರಿಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲು ತಿರುಮಲ ದೇವಸ್ಥಾನ ಟ್ರಸ್ಟ್ ನಿರ್ಧರಿಸಿದೆ ಎನ್ನಲಾಗಿದೆ.

ಮೊದಲ ಹಂತವಾಗಿ ಇನ್ನೊಂದು ವಾರದಲ್ಲಿ ದೇವಸ್ಥಾನದ ಎಲ್ಲ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಟಿಟಿಡಿಯ ವಸತಿ ಗೃಹಗಳಲ್ಲಿ ತಂಗುವ ಭಕ್ತರಿಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗುತ್ತದೆ. ಅಲ್ಲದೆ ತಿರುಮಲದ ಎಲ್ಲಾ ಹೋಟೆಲ್ ಗಳ ಮಾಲೀಕರ ಸಭೆ ಕರೆದು ಪ್ಲಾಸ್ಟಿಕ್ ಬಾಟಲಿ ಬಳಕೆ ನಿಲ್ಲಿಸುವಂತೆ ಮನವೊಲಿಸಲಾಗುತ್ತದೆ.