ಫೆ.6 ರಂದು ರಾಜ್ಯಕ್ಕೆ ಮತ್ತೆ ‘ಪ್ರಧಾನಿ ಮೋದಿ’ ಭೇಟಿ : ಧಾರವಾಡ, ತುಮಕೂರು ಜಿಲ್ಲೆಗೆ ಆಗಮನ – Vishwanews24
ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ..
ಫೆ.6 ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ..
ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ, ಸಮಾವೇಶದಲ್ಲಿ ಭಾಗಿ..
ಬೆಂಗಳೂರು : ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ ಈಗಾಗಲೇ ರಾಜ್ಯದ ಹಲವು ಕಡೆ ಭರ್ಜರಿ ಸಮಾವೇಶ, ಪ್ರಚಾರ ನಡೆಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಫೆ.6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ ನೀಡಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮಕ್ಕೆ ಕಳೆದ ಗುರುವಾರವಷ್ಟೇ ಪ್ರಧಾನಿ ಮೋದಿ ಆಗಮಿಸಿದ್ದರು. ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ಮೋದಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದರು. 51900 ಜನರಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಸರ್ಕಾರ ಹೊಸ ಇತಿಹಾಸ ನಿರ್ಮಾಣ ಮಾಡಲಾಗಿದೆ.
