ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ಗೆ ನುಗ್ಗಿ , ಪಕ್ಕದ ಕಂದಕಕ್ಕೆ ಉರುಳಿದ ಕಾರು : ಒಬ್ಬ ಗಂಭೀರ, ಮೂವರಿಗೆ ಗಾಯ – Vishwanews24
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ಗೆ ನುಗ್ಗಿ , ಪಕ್ಕದ ಕಂದಕಕ್ಕೆ ಉರುಳಿದ ಕಾರು : ಒಬ್ಬ ಗಂಭೀರ, ಮೂವರಿಗೆ ಗಾಯ – Vishwanews24
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿರುವ ಹೊಟೇಲಿಗೆ ನುಗ್ಗಿ ಬಳಿಕ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಡೆದಿದೆ.
ಇಂಡಿಕಾ ಕಾರು ಮಂಗಳೂರಿನಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದ್ದು, ಹೊಟೇಲ್ ಮಾಲಕ ಗಂಭೀರ ಗಾಯಗೊಂಡಿದ್ದು, ಮೂವರು ಹೊಟೇಲ್ ಸಿಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡಿರುವ ಹೊಟೇಲ್ ಮಾಲಕರಾದ ರಿಯಾಝ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇನ್ನು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ : ಕುಂದಾಪುರದ ಒಂದೇ ಕುಟುಂಬದ ಮೂವರ ಸಾವು – VIshwanews24
