ಬಂಟ್ವಾಳ: ಜೀಪ್ ಮತ್ತು ಬೈಕ್ ಅಪಘಾತ – ಸವಾರ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಜೀಪ್ ಮತ್ತು ಬೈಕ್ ಅಪಘಾತ – ಸವಾರ ಮೃತ್ಯು

ಬಂಟ್ವಾಳ: ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕ.

ಬಂಟ್ವಾದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದೆ ಎನ್ನಲಾಗಿದೆ.

ಬೆಳಗಾವಿ: ವಸತಿ ನಿವಾಸದಲ್ಲಿ ಅನಧಿಕೃತ ಮಸೀದಿ ನಿಮಾಣ -ಫಾತೀಮಾ ಮಸೀದಿಗೆ ಬೀಗ ಹಾಕಿದ ಮಹಾನಗರ ಪಾಲಿಕೆ – Vishwanews24

ಇನ್ನು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply