ಬಂಟ್ವಾಳ : ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ – ಓರ್ವ ಸಾವು… Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ : ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ – ಓರ್ವ ಸಾವು…

ಬಂಟ್ವಾಳ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ಮೃತರನ್ನು ನಂದರಬೆಟ್ಟು ನಿವಾಸಿ 77 ವರ್ಷದ ಸದಾಶಿವ ಆಚಾರ್ಯ ಎಂದು ಗುರುತಿಸಲಾಗಿದೆ. ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ.

ಬ್ರಹ್ಮಾವರ : ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣು – Vishwanews24

ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು. ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮೂಲ್ಕಿ ಬಪ್ಪನಾಡು ಜಾತ್ರೆ : ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ – Vishwanews24

Leave a Reply