ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ : ಬೊಮ್ಮಾಯಿ ಮನವಿ -Vishwanews24

Featured, ರಾಜ್ಯ ನ್ಯೂಸ್

ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ : ಬೊಮ್ಮಾಯಿ ಮನವಿ -Vishwanews24

ಹುಬ್ಬಳ್ಳಿ: ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು. ಜನರು ಈಗಷ್ಟೇ ಕೊರೊನಾ ಹೊಡೆತದಿಂದ ಚೇತರಿಸಿ ಕೊಳ್ಳುತ್ತಿದ್ದಾರೆ. ಬಂದ್‍ನಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಕೆಎಲ್‍ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ. ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.

ಭಾರತ ಬಂದ್ ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್ ಗೆ ಬೆಂಬಲ ನೀಡುತ್ತಿದೆ ಎಂದರು.