ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ – Vishwanews24
ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ
ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಖಂಡಿಸಿ ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ.
ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಹೇಳಿದ್ದಾರೆ. ಸಾಗರದ ಜನತೆ ನಾಳೆ ಸ್ವಯಂ ಪ್ರೇರಣೆಯಿಂದ ನಾಳಿನ ಬಂದ್ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ – Vishwanews24
ಅನ್ಯಕೋಮಿನ ಯುವಕನೊಬ್ಬ ಮಚ್ಚು ಬೀಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಮೀರ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದಾನೆ. ದಾಳಿ ವೇಳೆ ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಈ ನಿನ್ನೆ ಸಾಗರದಲ್ಲಿ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಈ ಯಾತ್ರೆಯಲ್ಲಿ ಸುನೀಲ್ ಜತೆ ಸಮೀರ್ ತೆರಳಿದ್ದರು. ಈ ವೇಳೆ ಸುನೀಲ್ ಮೇಲೆ ಮಚ್ಚು ಬೀಸಿ ಸಮೀರ್ ಪರಾರಿಯಾಗಿದ್ದಾನೆ.ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು: ಅಂಜುಶ್ರೀ ಸಾವಿಗೆ ವಿಷಾಹಾರ ಕಾರಣವಲ್ಲ :– ಪ್ರಾಥಮಿಕ ವರದಿ – Vishwanews24
