ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್ , ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ : ಎಂ.ಬಿ. ಪಾಟೀಲ್  – Vishwanews24

Featured, ರಾಜ್ಯ ನ್ಯೂಸ್

ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್ , ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ : ಎಂ.ಬಿ. ಪಾಟೀಲ್ 

ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್. ಬಿಜೆಪಿಯವರಾರು ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಿಂದ ದೇಶ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಬದುಕೋಕು ಬಿಡಲ್ಲ ಸಾಯೋಕು ಬಿಡಲ್ಲ ಸತ್ತ ಮೇಲೂ ಬಿಡೋದಿಲ್ಲ ಅಷ್ಟೊಂದು ಜಿಎಸ್‍ಟಿ ಹಾಕ್ತಾರೆ. ಹಿಂದುತ್ವ ಅಜೆಂಡಾ ಭಾವನೆ ಕೆರಳಿಸುತ್ತಾ ಚುನಾವಣೆ ಮಾಡ್ತಾರೆ. 40% ಭ್ರಷ್ಟಾಚಾರ ಮಾಡಿರೋ ಸರ್ಕಾರ ಕಾಂಟ್ರಾಕ್ಟರ್ ಗಳೇ ಈ ಬಗ್ಗೆ ದೂರನ್ನು ನೀಡಿದ್ದಾರೆ. ಐಟಿ, ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಹತ್ತಿರ ಬರುತ್ತಿದ್ದಂತೆ 40% ದಿಂದ 80% ಕ್ಕೆ ಹೋದರೂ ಅಚ್ಚರಿಯಿಲ್ಲ. ಹಿಜಬ್, ಹಲಾಲ್, ಪಠ್ಯ ಪುಸ್ತಕ ಗೊಂದಲ. ಇದೇ ಈ ಸರ್ಕಾರದ ಸಾಧನೆ. ಲಿಂಗಾಯತ ಮಠವಲ್ಲ ಎಲ್ಲಾ ಸಮುದಾಯದ ಮಠಕ್ಕೆ ಹೋಗಿದ್ದೇನೆ. ಚರ್ಚ್ ಮಸೀದಿಗೂ ಹೋಗಿದ್ದೇನೆ. ಲಿಂಗಾಯತ ಪ್ರಚಾರ ಸಮಿತಿ ಅಧ್ಯಕ್ಷನಲ್ಲ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆಂದು 2018ರಲ್ಲಿ ಲಿಂಗಾಯತರು ಬಿಜೆಪಿಗೆ ಮತ ಹಾಕಿದ್ರು. ಈಗ ಪರಿಸ್ಥಿತಿ ಹಾಗಿಲ್ಲ ಈಗ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸ್ತಾರೆ ಎಂದರು.

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ : ಸುನಿಲ್ ಕುಮಾರ್ – Vishwanews24

Leave a Reply