ಬಾಬಾಬುಡನ್​ಗಿರಿ ಡಿ. 6, 7, 8 ರಂದು ದತ್ತ ಜಯಂತಿ ಆಚರಿಸಿಲು ಹೈಕೋರ್ಟ್ ಅನುಮತಿ -Vishwanews24

Featured, ರಾಜ್ಯ ನ್ಯೂಸ್

ಬಾಬಾಬುಡನ್​ಗಿರಿ ಡಿ. 6, 7, 8 ರಂದು ದತ್ತ ಜಯಂತಿ ಆಚರಿಸಿಲು ಹೈಕೋರ್ಟ್ ಅನುಮತಿ

ಬೆಂಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಬುಧವಾರ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಅನುಮತಿಸಿದೆ.

ಪ್ರಕರಣದ‌ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ‌ಈ ಆದೇಶ ನೀಡಿದೆ.

ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ‌ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ‌ದತ್ತ ಜಯಂತಿ‌ ಆಚರಣೆಗೆ ಅನುಮತಿ ನೀಡಬೇಕು ಸರ್ಕಾರದ ಮನವಿ‌ ಮಾಡಿತ್ತು.. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಹಾಗೂ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.

 ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ , ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಸ್ಪಷ್ಟನೆ – Vishwanews24

 

Leave a Reply