ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ: ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ -Vishwanews 24
ನವದೆಹಲಿ: ಅಂದಿನ ಕಾಂಗ್ರೆಸ್ ಸರ್ಕಾರ ಬಾಬ್ರಿ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ. ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಆಂತರಿಕ ಘಟನೆಗಳು ನನಗೆ ತಿಳಿದಿಲ್ಲ. ಆದರೆ ಈ ಘಟನೆ ನಡೆಯಲು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ ಎಂಬುದು ವಾಸ್ತವ, ಇದಕ್ಕಾಗಿ ನನಗೆ ತಪ್ಪಿತಸ್ಥ ಭಾವನೆ ಇದೆ ಎಂದು ಹೇಳಿದ್ದಾರೆ.
ಸೇನೆ ಹಾಗೂ ಕೇಂದ್ರ ಪಡೆಗಳನ್ನು ಕಳಿಸುವ ಮೂಲಕ ಬಾಬ್ರಿ ಮಸೀದಿ ಧ್ವಂಸಗೊಳ್ಳದಂತೆ ಕಾಂಗ್ರೆಸ್ ಎಚ್ಚರ ವಹಿಸಬಹುದಿತ್ತು ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
