ಬಿ.ಎಸ್. ಯಡಿಯೂರಪ್ಪ ಪುತ್ರನ ಬದಲು ಕಾರ್ಯಕರ್ತರಿಗೆ ಕ್ಷೇತ್ರ ಬಿಟ್ಟುಕೊಡಬೇಕಿತ್ತು : ಜಮೀರ್ – Vishwanews24
ಬಿ.ಎಸ್. ಯಡಿಯೂರಪ್ಪ ಪುತ್ರನ ಬದಲು ಕಾರ್ಯಕರ್ತರಿಗೆ ಕ್ಷೇತ್ರ ಬಿಟ್ಟುಕೊಡಬೇಕಿತ್ತು : ಜಮೀರ್
ದಾವಣಗೆರೆ : ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿ ಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ವಿಚಾರವಾಗಿ ಮಾತನಾಡಿ ಮಾಜಿ ಸಚಿವ ಜಮೀರ್ ಅಹ್ಮದ್ಖಾನ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯಲ್ಲಿ ಕಾರ್ಯಕರ್ತರು ಇಲ್ಲವೇ? ಬೇರೆಯವರಿಗೆ ಬಿಟ್ಟುಕೊಡಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಸಿಎಂ ಮಾಡಿದ್ದರು. ಪುತ್ರನ ಬದಲು ಕಾರ್ಯಕರ್ತರಿಗೆ BSY ಕ್ಷೇತ್ರ ಬಿಟ್ಟುಕೊಡಬೇಕಿತ್ತು ಎಂದು ಜಮೀರ್ ಹೇಳಿದ್ದಾರೆ.
