ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕು : ಅರಗ ಜ್ಞಾನೇಂದ್ರ – Vishwanews24
ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕು : ಅರಗ ಜ್ಞಾನೇಂದ್ರ – Vishwanews24
ತುಮಕೂರು: ಹುಚ್ಚು ಹಿಡಿದಿರೋರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಟೀಕಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ, ಜಗತ್ತಿನ ಶ್ರೇಷ್ಠ ನಾಯಕ ಪ್ರಧಾನಿ ಮೋದಿ ಅವರನ್ನು ಹೊಂದಿರುವ ಪಕ್ಷ ಬಿಜೆಪಿ.
ಆ ಪಕ್ಷವನ್ನು ತೊರೆದು ಕಾಂಗ್ರೆಸ್ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕಷ್ಟೇ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ :
2023ರ ಚುನಾವಣೆಯಲ್ಲಿ ಜೆಡಿಎಸ್ನ ಸಾಧನೆ ಎಲ್ಲರಿಗೂ ತಿಳಿಯುತ್ತದೆ : ಕುಮಾರಸ್ವಾಮಿ – Vishwanews24
ಪಕ್ಷವು ಒಂದು ಪಾಲಿಸಿ ತೆಗೆದುಕೊಂಡಿದೆ. ಹಾಗಾಗಿ, ಜಿಲ್ಲೆಯನ್ನು ಹೊರತುಪಡಿಸಿ ಬೇರೆ ಬೇರೆಯವರ ಜಿಲ್ಲೆಯವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಭೇಟಿ ವೇಳೆ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.
ಇದನ್ನೂ ಓದಿ :
