ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಉದ್ದೇಶ ಈಡೇರುವುದಕ್ಕೆ ನಾವು ಬಿಡುವುದಿಲ್ಲ :ಎಚ್​​.ಡಿ ದೇವೇಗೌಡ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ದೇಶಾದ್ಯಂತ ಜಾರಿಗೆ ಮಾಡಲೊರಟ ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತನ್ನ ನಿರ್ಧಾರವನ್ನು ಪುನರ್​​ ಪರಿಶೀಲಿಸಲಿ ಎಂದು ಮಾಜಿ ಪ್ರಧಾನಿ ಎಚ್​​.ಡಿ ದೇವೇಗೌಡ ಆಗ್ರಹಿಸಿದ್ದಾರೆ.

ನಗರದ ಜಾತ್ಯತೀತ ಜನತಾ ದಳ(ಜೆಡಿಎಸ್​​) ಕಚೇರಿ ಜೆಪಿ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾಜಿ ಪ್ರಧಾನಿ ದೇವೇಗೌಡು ಭಾಗಿಯಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಷ್ಟ್ರೀಯ ನಾಗರಿಕ ನೋಂದಣಿ(ಎನ್​​ಆರ್​ಸಿ) ಮತ್ತು ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ಜೆಡಿಎಸ್​​ ಹೋರಾಟ ಮುಂದುವರಿಯಲಿದೆ ಎಂದರು.

 

ಸಿಎಎ, ಎನ್​​ಆರ್​ಸಿ ಮತ್ತು ಎನ್​​ಪಿಆರ್​​ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೊಳಿಸಬೇಡಿ ಎಂದು ಪ್ರತಿಭಟನಾಕಾರರು ಒತ್ತಾಯ ಮಾಡುತ್ತಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಲು ಮುಂದಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಲವು ನಿರ್ಧಾರಗಳು ದೇಶದ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುತ್ತಿವೆ ಎಂದು ಕಿಡಕಾರಿದರು.