ಬಿಜೆಪಿಗೆ ವೋಟು ಕೊಟ್ಟು ಇನ್ನೊಮ್ಮೆ ನಮಗೆ ಶಿಕ್ಷೆ ಕೊಡಬೇಡಿ : ಸಿದ್ದರಾಮಯ್ಯ ಮನವಿ -Vishwanews24

Featured, ರಾಜ್ಯ ನ್ಯೂಸ್

ರಾಯಚೂರು: ಹಿಂದಿನ ಬಾಗಿಲಿನಿಂದ ಯಡಿಯೂರಪ್ಪ ಅವರು ಬಂದು ಅಧಿಕಾರ ಹಿಡಿದು ಕುಳಿತಿದ್ದಾರೆ. ಬಿಜೆಪಿಗೆ ವೋಟು ಕೊಟ್ಟು ಬಿಜೆಪಿಗೆ ವೋಟು ಕೊಟ್ಟು ಇನ್ನೊಮ್ಮೆ ನಮಗೆ ಶಿಕ್ಷೆ ಕೊಡಬೇಡಿ.. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಮನವಿ ಮಾಡಿದ್ದಾರೆ.

ಲಿಂಗಸುಗೂರು ತಾಲೂಕಿನ ಮುದುಗಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರೇ ಕರ್ನಾಟಕದ ಜನರನ್ನ ನಿರ್ಲಕ್ಷ್ಯ ಮಾಡಿದ ನಿಮಗೆ ಜನರ ಶಾಪ ತಟ್ಟದೇ ಇರಲ್ಲ.ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕಿತ್ತು ಅಧಿಕಾರ ಹಿಡಿದು ಕುಳಿತಿದ್ದಾರೆ. ಆದರೆ ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪ ಅವರ ರೆಕ್ಕೆ ಪುಕ್ಕ ಕಟ್ ಮಾಡಿದ್ದಾರೆ. ಕೇಂದ್ರ ಸರ್ಕಾರವೂ ಆರ್ಥಿಕವಾಗಿ ದಿವಾಳಿಯಾಗಿದೆ. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವೂ ದಿವಾಳಿಯಾಗಿದೆ. ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಪ್ರವಾಹದಿಂದ ಹಾನಿಗೊಳಗಾದ ಗ್ರಾಮ, ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದೇನೆ. ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕಾಣದಂತ ನೆರೆ ಆಗಿದೆ. ದಾಖಲೆ ಪ್ರಕಾರ 1914ರಲ್ಲಿ ದೊಡ್ಡ ಪ್ರವಾಹ ಬಂದಿತ್ತು. ಈ ವರ್ಷ ಎದುರಾಗಿರುವ ಪ್ರವಾಹದಿಂದ 8 ಲಕ್ಷ ಜನ ಬೀದಿ ಪಾಲಾಗಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. 80 ಜನ ಸಸಾವನ್ನಪ್ಪಿ,ಹತ್ತಾರು ಜನ ನಾಪತ್ತೆಯಾಗಿ, ಲಕ್ಷಾಂತರ ಮೂಕಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.