ಬೆಂಗಳೂರಿನಲ್ಲಿ ಕಾರು ಹಾಗೂ ಬೈಕ್‌ ಅಪಘಾತ : ಸುಳ್ಯದ ಯುವಕ ಸಾವು – Vishwanews24

Featured, ದಕ್ಷಿಣ ಕನ್ನಡ

ಬೆಂಗಳೂರಿನಲ್ಲಿ ಕಾರು ಹಾಗೂ ಬೈಕ್‌ ಅಪಘಾತ : ಸುಳ್ಯದ ಯುವಕ ಸಾವು

ಸುಳ್ಯ: ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ಏ.೨೪ರ ಸೋಮವಾರ ಬೆಳಗ್ಗೆ ನಡೆದಿದೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್‌ ಬಾಳೆಬೈಲು (30) ಮೃತ ಯುವಕ. ಯತೀಶ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯತೀಶ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೆ ಮೃತರಾಗಿದ್ದಾರೆ. ಅವಿವಾಹಿತರಾಗಿರುವ ಯತೀಶ್‌ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಉಡುಪಿ: ಕಾಂಗ್ರೆಸ್‌ ಪಕ್ಷ ಅಧಿಕಾರದ ಗದ್ದುಗೆ ಏರುವುದು ಶತಃಸಿದ್ಧ: ಡಿ.ಕೆ.ಶಿವಕುಮಾರ್ – Vishwanews24

Leave a Reply