ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ : ಬಿಎಸ್‌ ವೈ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ : ಬಿಎಸ್‌ ವೈ -Vishwanews24

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಕುರಿತಾಗಿ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದಿದ್ದಾರೆ.

ಎಸ್‌ಎಸ್‌ಎಲ್ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ ಸಚಿವರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದು ಏಕಪಕ್ಷೀಯ ತೀರ್ಮಾನ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.