ಬೆಂಗಳೂರು : ಕೇಸರಿ ಶಾಲೆಗಾಗಿ ಹಿಂದೂಪರ ಸಂಘಟನೆಗಳಿಂದ ಅಭಿಯಾನ – Vishwanews24
ಬೆಂಗಳೂರು : ಕೇಸರಿ ಶಾಲೆಗಾಗಿ ಹಿಂದೂಪರ ಸಂಘಟನೆಗಳಿಂದ ಅಭಿಯಾನ
ಬೆಂಗಳೂರು : ಹಿಜಾಬ್, ಹಲಾಲ್ ಕಟ್, ಅಜಾನ್ ಬಳಿಕ ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದ್ದು, ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡದಿದ್ದರೆ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಹಿಂದೂ ಸಂಘಟನೆಗಳು ಅಭಿಯಾನಕ್ಕೆ ಮುಂದಾಗಿವೆ.
ರಾಜ್ಯದಲ್ಲಿ ಮದರಸಾಗಳನ್ನು ನಿಷೇಧ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಮದರಸಾಗಳನ್ನು ನಿಷೇಧ ಮಾಡಲಾಗಿದೆ. ಕರ್ನಾಟಕದಲ್ಲೂ ಮದಸರಾಸಗಳನ್ನು ಬ್ಯಾನ್ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಂಟ್ವಾಳ: ತಲಪಾಡಿಯಲ್ಲಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ – Vishwanews24
ಕೇಸರಿ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯ ಇರಬೇಕು. ಪಠ್ಯ ಪುಸ್ತಕಗಳಲ್ಲಿ ಹಿಂದುತ್ವದ ಹಿನ್ನೆಲೆ ಇರುವ ಪಾಠಗಳು ಜೊತೆಗೆ ಹಿಂದುತ್ವದ ಹಿನ್ನೆಲೆ ಇರುವ ಪ್ರಾಧ್ಯಾಪಕರು ಇರಬೇಕು, ಕೇಸರಿ ಕಾಲೇಜಿಗೆ ಕೇಸರಿ ಬಣ್ಣ, ಎಲ್ಲಾ ವಿದ್ಯಾರ್ಥಿಗಳು ಕೇಸರಿ ಬಣ್ಣದ ಸಮವಸ್ತ್ರ ಇರಬೇಕು ಎಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿ ಮೃತ್ಯು – Vishwanews24
