ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ ಸಹಿತ ಮೂವರ ಬಂಧನ – vishwanews24
ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಅತ್ತೆ, ಬಾಮೈದಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು : ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತುಲ್ ಪತ್ನಿ, ಎ1 ನಿಖಿತಾ ಸಿಂಘಾನಿಯ, ಆತುಲ್ ಅತ್ತೆ, ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂವರನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದರು. ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ಏನಿದು ಪ್ರಕರಣ
ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್ನ ಪ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹರಿಬಿಟ್ಟಿದ್ದಾರೆ. ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತುಲ್ ಸುಭಾಷ ಆತ್ಮಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಅಲ್ಲದೇ ಪ್ರಕರಣ ಸುಪ್ರೀಂ ಕೋರ್ಟ್ನಲ್ಲೂ ಪ್ರಸ್ತಾಪವಾಗಿತ್ತು.
